Advertisement
ಸುದ್ದಿಗಳು

ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಮಾನವಾಗಿ ಲಭ್ಯವಾಗಬೇಕು – ಡಾ.ಕೆ ಚಿನ್ನಪ್ಪ ಗೌಡ

Share

ಸುಳ್ಯ:ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಮಾನವಾಗಿ ಮತ್ತು ಅತ್ಯುತ್ತಮ ರೀತಿಯಲ್ಲಿ ಸಿಗಬೇಕು. ಶಿಕ್ಷಣ ಸಂಸ್ಥೆ ಯಾವ ಉದ್ದೇಶದಿಂದ ಬಂದಿದೆಯೋ ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹಾವೇರಿ ಜಾನಪದ ವಿಶ್ವ ವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಡಾ. ಕೆ ಚಿನ್ನಪ್ಪ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಿದ್ಧವಿದ್ದುದನ್ನು ಬಳಸಿಕೊಳ್ಳುವುದಲ್ಲ, ಅವರನ್ನು ಸಿದ್ಧ ಪಡಿಸುವ ಕೆಲಸ ಶಿಕ್ಷಣ ಸಂಸ್ಥೆಗಳಿಂದಾಗಬೇಕು. ಅದಕ್ಕಾಗಿ ಅಲ್ಲಿರುವ ಅಧ್ಯಾಪಕರು ವಿದ್ಯಾರ್ಥಿಗಳು ಆಸಕ್ತಿಯಿಂದ, ಬದ್ಧತೆಯಿಂದ, ಲವಲವಿಕೆಯಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು, ಆಧುನಿಕತೆಗೆ ಸರಿಯಾಗಿ ಎಲ್ಲರೂ ತೆರೆದುಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ), ಸುಳ್ಯ ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದರು ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಊರಿನ ಅಭಿವೃದ್ಧಿ ಸಾಧ್ಯ ಎಂದು ಮನಗಂಡವರು ಕೆವಿಜಿಯವರು. ಆ ನಿಟ್ಟಿನಲ್ಲಿ ಇಂದು ಇಷ್ಟೆಲ್ಲಾ ವಿದ್ಯಾ ಸಂಸ್ಥೆಗಳು ಸುಳ್ಯದಲ್ಲಿ ತಲೆ ಎತ್ತಿವೆ. ವಿದ್ಯೆ ಎನ್ನುವುದಕ್ಕೆ ಕೊನೆಯೆಂಬುದಿಲ್ಲ, ಆದರೆ ಪಡೆದ ವಿದ್ಯೆಯನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಭವಾನಿಶಂಕರ ಅಡ್ತಲೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಧರ ಗೌಡ ಕೆ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಕೆ ಪೂವಪ್ಪ ಗೌಡ ವಿದ್ಯಾರ್ಥಿ ಪದಾಧಿಕಾರಿಗಳಿಗೆ, ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ  ಕೃಷ್ಣಪ್ರಸಾದ್ ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ತನ್ನ ಅನಿಸಿಕೆ ವ್ಯಕ್ತಪಡಿಸಿದರು.

ಸ್ಮಿತಾ ಎಂ, ಸಿಂಚನಾ, ಜೋತ್ಸ್ನಾ, ರಚನಾ, ರಕ್ಷಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪೂನಂ ಕಾರ್ಯಪ್ಪ ಶುಭ ಸಂದೇಶ ವಾಚಿಸಿ, ಜತೆ ಕಾರ್ಯದರ್ಶಿ ಲೋಹಿತ್ ಬಿ ಎ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಕೊಡಮಾಡಲ್ಪಟ್ಟ ಧನ ಸಹಾಯದ ಪಟ್ಟಿಯನ್ನು ಪ್ರಸ್ತುತಪಡಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಮಮತಾ ಕೆ ಅತಿಥಿಗಳನ್ನು ಪರಿಚಯಿಸಿ, ಕಾರ್ಯದರ್ಶಿ ಮೋನಿಷಾ ಕೆ ಎಂ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಪ್ರೇಮಿತಾ ಬಿ ಜೆ ಹಾಗೂ ದಿಯಾ ಮರಿಯಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

4 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

11 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

11 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

19 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

20 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago