ಶಿಥಿಲಗೊಂಡು ಕುಸಿಯುವ ಭೀತಿಯಲ್ಲಿ ಪ್ರಯಾಣಿಕರ ತಂಗುದಾಣ

May 15, 2019
1:00 PM

ಕಡಬ: ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿರುವ ಪಂಚಾಯತ್  2 ಪ್ರಯಾಣಿಕರ ತಂಗುದಾಣದ ಪೈಕಿ ದೈವಗಳ ಮಾಡದ ಬಳಿ ಇರುವ ತಂಗುದಾಣ ಸಂಪೂರ್ಣವಾಗಿ ಶಿಥಿಲಗೊಂಡು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಹಂತದಲ್ಲಿದೆ.

ಕಡಬ ತಾಲೂಕು ಕೇಂದ್ರವಾಗಿದ್ದರೂ ಇಲ್ಲಿ ಸುಸಜ್ಜಿತ ಬಸ್ ತಂಗುದಾಣವಿಲ್ಲ. ಕೆಎಸ್ಸಾರ್ಟಿಸಿ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದೆಯಾದರೂ ಜಮೀನಿನ ಸಮಸ್ಯೆಯಿಂದಾಗಿ ಅದೂ ಕೂಡ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವುದು ಸಂಶಯ. ಇದೀಗ ಇರುವ ಪ್ರಯಾಣಿಕರ ತಂಗುದಾಣವೂ ಕುಸಿದುಬೀಳುವ ಹಂತದಲ್ಲಿದೆ. ತಂಗುದಾಣದ ಛಾವಣಿಯ ಮರದ ಪಕ್ಕಾಸು ಹಾಗೂ ರೀಪುಗಳು ಶಿಥಿಲಗೊಂಡು ಮುರಿದುಹೋಗಿವೆ. ಅಲ್ಲಲ್ಲಿ ಹೆಂಚುಗಳು ಕೂಡ ಕೆಳಕ್ಕೆ ಬಿದ್ದು ಆಕಾಶ ಕಾಣಿಸುತ್ತಿದೆ. ಪ್ರಸ್ತುತ ಸಾರ್ವಜನಿಕರು ಇದೇ ತಂಗುದಾಣವನ್ನು ಬಳಸುತ್ತಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ. ಆದುದರಿಂದ ಕೂಡಲೇ ಪಂಚಾಯತ್ ಆಡಳಿತ ಈ ಕುರಿತು ಗಮನಹರಿಸಬೇಕಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror