ಕಡಬ: ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿರುವ ಪಂಚಾಯತ್ 2 ಪ್ರಯಾಣಿಕರ ತಂಗುದಾಣದ ಪೈಕಿ ದೈವಗಳ ಮಾಡದ ಬಳಿ ಇರುವ ತಂಗುದಾಣ ಸಂಪೂರ್ಣವಾಗಿ ಶಿಥಿಲಗೊಂಡು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಹಂತದಲ್ಲಿದೆ.
ಕಡಬ ತಾಲೂಕು ಕೇಂದ್ರವಾಗಿದ್ದರೂ ಇಲ್ಲಿ ಸುಸಜ್ಜಿತ ಬಸ್ ತಂಗುದಾಣವಿಲ್ಲ. ಕೆಎಸ್ಸಾರ್ಟಿಸಿ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದೆಯಾದರೂ ಜಮೀನಿನ ಸಮಸ್ಯೆಯಿಂದಾಗಿ ಅದೂ ಕೂಡ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವುದು ಸಂಶಯ. ಇದೀಗ ಇರುವ ಪ್ರಯಾಣಿಕರ ತಂಗುದಾಣವೂ ಕುಸಿದುಬೀಳುವ ಹಂತದಲ್ಲಿದೆ. ತಂಗುದಾಣದ ಛಾವಣಿಯ ಮರದ ಪಕ್ಕಾಸು ಹಾಗೂ ರೀಪುಗಳು ಶಿಥಿಲಗೊಂಡು ಮುರಿದುಹೋಗಿವೆ. ಅಲ್ಲಲ್ಲಿ ಹೆಂಚುಗಳು ಕೂಡ ಕೆಳಕ್ಕೆ ಬಿದ್ದು ಆಕಾಶ ಕಾಣಿಸುತ್ತಿದೆ. ಪ್ರಸ್ತುತ ಸಾರ್ವಜನಿಕರು ಇದೇ ತಂಗುದಾಣವನ್ನು ಬಳಸುತ್ತಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ. ಆದುದರಿಂದ ಕೂಡಲೇ ಪಂಚಾಯತ್ ಆಡಳಿತ ಈ ಕುರಿತು ಗಮನಹರಿಸಬೇಕಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…