ಕಡಬ: ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿರುವ ಪಂಚಾಯತ್ 2 ಪ್ರಯಾಣಿಕರ ತಂಗುದಾಣದ ಪೈಕಿ ದೈವಗಳ ಮಾಡದ ಬಳಿ ಇರುವ ತಂಗುದಾಣ ಸಂಪೂರ್ಣವಾಗಿ ಶಿಥಿಲಗೊಂಡು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಹಂತದಲ್ಲಿದೆ.
ಕಡಬ ತಾಲೂಕು ಕೇಂದ್ರವಾಗಿದ್ದರೂ ಇಲ್ಲಿ ಸುಸಜ್ಜಿತ ಬಸ್ ತಂಗುದಾಣವಿಲ್ಲ. ಕೆಎಸ್ಸಾರ್ಟಿಸಿ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದೆಯಾದರೂ ಜಮೀನಿನ ಸಮಸ್ಯೆಯಿಂದಾಗಿ ಅದೂ ಕೂಡ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವುದು ಸಂಶಯ. ಇದೀಗ ಇರುವ ಪ್ರಯಾಣಿಕರ ತಂಗುದಾಣವೂ ಕುಸಿದುಬೀಳುವ ಹಂತದಲ್ಲಿದೆ. ತಂಗುದಾಣದ ಛಾವಣಿಯ ಮರದ ಪಕ್ಕಾಸು ಹಾಗೂ ರೀಪುಗಳು ಶಿಥಿಲಗೊಂಡು ಮುರಿದುಹೋಗಿವೆ. ಅಲ್ಲಲ್ಲಿ ಹೆಂಚುಗಳು ಕೂಡ ಕೆಳಕ್ಕೆ ಬಿದ್ದು ಆಕಾಶ ಕಾಣಿಸುತ್ತಿದೆ. ಪ್ರಸ್ತುತ ಸಾರ್ವಜನಿಕರು ಇದೇ ತಂಗುದಾಣವನ್ನು ಬಳಸುತ್ತಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ. ಆದುದರಿಂದ ಕೂಡಲೇ ಪಂಚಾಯತ್ ಆಡಳಿತ ಈ ಕುರಿತು ಗಮನಹರಿಸಬೇಕಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…