ಕಡಬ: ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿರುವ ಪಂಚಾಯತ್ 2 ಪ್ರಯಾಣಿಕರ ತಂಗುದಾಣದ ಪೈಕಿ ದೈವಗಳ ಮಾಡದ ಬಳಿ ಇರುವ ತಂಗುದಾಣ ಸಂಪೂರ್ಣವಾಗಿ ಶಿಥಿಲಗೊಂಡು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಹಂತದಲ್ಲಿದೆ.
ಕಡಬ ತಾಲೂಕು ಕೇಂದ್ರವಾಗಿದ್ದರೂ ಇಲ್ಲಿ ಸುಸಜ್ಜಿತ ಬಸ್ ತಂಗುದಾಣವಿಲ್ಲ. ಕೆಎಸ್ಸಾರ್ಟಿಸಿ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದೆಯಾದರೂ ಜಮೀನಿನ ಸಮಸ್ಯೆಯಿಂದಾಗಿ ಅದೂ ಕೂಡ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವುದು ಸಂಶಯ. ಇದೀಗ ಇರುವ ಪ್ರಯಾಣಿಕರ ತಂಗುದಾಣವೂ ಕುಸಿದುಬೀಳುವ ಹಂತದಲ್ಲಿದೆ. ತಂಗುದಾಣದ ಛಾವಣಿಯ ಮರದ ಪಕ್ಕಾಸು ಹಾಗೂ ರೀಪುಗಳು ಶಿಥಿಲಗೊಂಡು ಮುರಿದುಹೋಗಿವೆ. ಅಲ್ಲಲ್ಲಿ ಹೆಂಚುಗಳು ಕೂಡ ಕೆಳಕ್ಕೆ ಬಿದ್ದು ಆಕಾಶ ಕಾಣಿಸುತ್ತಿದೆ. ಪ್ರಸ್ತುತ ಸಾರ್ವಜನಿಕರು ಇದೇ ತಂಗುದಾಣವನ್ನು ಬಳಸುತ್ತಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ. ಆದುದರಿಂದ ಕೂಡಲೇ ಪಂಚಾಯತ್ ಆಡಳಿತ ಈ ಕುರಿತು ಗಮನಹರಿಸಬೇಕಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…