ಕಡಬ: ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿರುವ ಪಂಚಾಯತ್ 2 ಪ್ರಯಾಣಿಕರ ತಂಗುದಾಣದ ಪೈಕಿ ದೈವಗಳ ಮಾಡದ ಬಳಿ ಇರುವ ತಂಗುದಾಣ ಸಂಪೂರ್ಣವಾಗಿ ಶಿಥಿಲಗೊಂಡು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಹಂತದಲ್ಲಿದೆ.
ಕಡಬ ತಾಲೂಕು ಕೇಂದ್ರವಾಗಿದ್ದರೂ ಇಲ್ಲಿ ಸುಸಜ್ಜಿತ ಬಸ್ ತಂಗುದಾಣವಿಲ್ಲ. ಕೆಎಸ್ಸಾರ್ಟಿಸಿ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದೆಯಾದರೂ ಜಮೀನಿನ ಸಮಸ್ಯೆಯಿಂದಾಗಿ ಅದೂ ಕೂಡ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವುದು ಸಂಶಯ. ಇದೀಗ ಇರುವ ಪ್ರಯಾಣಿಕರ ತಂಗುದಾಣವೂ ಕುಸಿದುಬೀಳುವ ಹಂತದಲ್ಲಿದೆ. ತಂಗುದಾಣದ ಛಾವಣಿಯ ಮರದ ಪಕ್ಕಾಸು ಹಾಗೂ ರೀಪುಗಳು ಶಿಥಿಲಗೊಂಡು ಮುರಿದುಹೋಗಿವೆ. ಅಲ್ಲಲ್ಲಿ ಹೆಂಚುಗಳು ಕೂಡ ಕೆಳಕ್ಕೆ ಬಿದ್ದು ಆಕಾಶ ಕಾಣಿಸುತ್ತಿದೆ. ಪ್ರಸ್ತುತ ಸಾರ್ವಜನಿಕರು ಇದೇ ತಂಗುದಾಣವನ್ನು ಬಳಸುತ್ತಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ. ಆದುದರಿಂದ ಕೂಡಲೇ ಪಂಚಾಯತ್ ಆಡಳಿತ ಈ ಕುರಿತು ಗಮನಹರಿಸಬೇಕಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…