ಕಡಬ: ತಾಲೂಕು ಕೇಂದ್ರ ಕಡಬ ಪೇಟೆಯಲ್ಲಿರುವ ಪಂಚಾಯತ್ 2 ಪ್ರಯಾಣಿಕರ ತಂಗುದಾಣದ ಪೈಕಿ ದೈವಗಳ ಮಾಡದ ಬಳಿ ಇರುವ ತಂಗುದಾಣ ಸಂಪೂರ್ಣವಾಗಿ ಶಿಥಿಲಗೊಂಡು ಯಾವುದೇ ಕ್ಷಣದಲ್ಲಿ ಕುಸಿದುಬೀಳುವ ಹಂತದಲ್ಲಿದೆ.
ಕಡಬ ತಾಲೂಕು ಕೇಂದ್ರವಾಗಿದ್ದರೂ ಇಲ್ಲಿ ಸುಸಜ್ಜಿತ ಬಸ್ ತಂಗುದಾಣವಿಲ್ಲ. ಕೆಎಸ್ಸಾರ್ಟಿಸಿ ವತಿಯಿಂದ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಪ್ರಾಥಮಿಕ ಪ್ರಕ್ರಿಯೆಗಳು ನಡೆದಿದೆಯಾದರೂ ಜಮೀನಿನ ಸಮಸ್ಯೆಯಿಂದಾಗಿ ಅದೂ ಕೂಡ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವುದು ಸಂಶಯ. ಇದೀಗ ಇರುವ ಪ್ರಯಾಣಿಕರ ತಂಗುದಾಣವೂ ಕುಸಿದುಬೀಳುವ ಹಂತದಲ್ಲಿದೆ. ತಂಗುದಾಣದ ಛಾವಣಿಯ ಮರದ ಪಕ್ಕಾಸು ಹಾಗೂ ರೀಪುಗಳು ಶಿಥಿಲಗೊಂಡು ಮುರಿದುಹೋಗಿವೆ. ಅಲ್ಲಲ್ಲಿ ಹೆಂಚುಗಳು ಕೂಡ ಕೆಳಕ್ಕೆ ಬಿದ್ದು ಆಕಾಶ ಕಾಣಿಸುತ್ತಿದೆ. ಪ್ರಸ್ತುತ ಸಾರ್ವಜನಿಕರು ಇದೇ ತಂಗುದಾಣವನ್ನು ಬಳಸುತ್ತಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಗಳು ಕೂಡ ಹೆಚ್ಚಿವೆ. ಆದುದರಿಂದ ಕೂಡಲೇ ಪಂಚಾಯತ್ ಆಡಳಿತ ಈ ಕುರಿತು ಗಮನಹರಿಸಬೇಕಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…