ಸುಳ್ಯ: ಅಡಿಕೆ ಮರ ಏರುವ ತರಬೇತಿ ಶಿಬಿರದ ಮರುದಿನವೇ ಯುವಕನೊಬ್ಬ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಇದು ಪಂಜದಲ್ಲಿ ನಡೆದ ಅಡಿಕೆ ಮರ ಏರುವ ಶಿಬಿರದ ನಂತರದ ಮೊದಲ ಸುದ್ದಿ.
ಸಹಕಾರಿ ಸಂಘಗಳು ಮುಂಚೂಣಿಯಲ್ಲಿ ನಿಂತು ಅಡಿಕೆ ಬೆಳೆಗಾರರ ರಕ್ಷಣೆಯ ಕಡೆಗೆ ಹೆಜ್ಜೆ ಇಟ್ಟಿವೆ. ಅಡಿಕೆ ಮರ ಏರುವ ತರಬೇತಿ ಮೂಲಕ ಸ್ವ ಉದ್ಯೋಗ, ಕೃಷಿ ರಕ್ಷಣೆಯ ಕಡೆಗೆ ಮನಸ್ಸು ಮಾಡಿದ್ದಾರೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಕ್ಯಾಂಪ್ಕೋ ನೇತೃತ್ವದಲ್ಲಿ ವಿಟ್ಲ ಸಿಪಿಸಿಆರ್ ಐ ವಠಾರದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ” ಅಡಿಕೆ ಕೌಶಲ್ಯ ಪಡೆ ” ರಚನೆ ಆಗಿತ್ತು. ಅದೇ ಹುಮ್ಮಸ್ಸಿನಲ್ಲಿ ಮತ್ತೊಂದು ಶಿಬಿರ ನಡೆಯಿತು. ಎರಡೂ ಶಿಬಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದು ಇಡೀ ಜಿಲ್ಲೆಗೆ, ಅಡಿಕೆ ಬೆಳೆಗಾರರಿಗೆ ಉತ್ತಮ ಸಂದೇಶ ನೀಡಿತು. ಇದರ ಬೆನ್ನಲ್ಲೇ ಸಹಕಾರಿ ಸಂಘಗಳ ಮೂಲಕ ಜಿಲ್ಲೆಯಲ್ಲಿ ಇಂತಹ ಶಿಬಿರ ನಡೆಯುವ ಬಗ್ಗೆ ಯೋಚನೆ ಆರಂಭವಾಯಿತು. ಪೆರ್ಲದಲ್ಲಿ ಸಹಕಾರಿ ಸಂಘದ ಮೂಲಕ ಶಿ ಬಿರ ನಡೆದರೆ, ಈಗ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ಶಿಬಿರ ನಡೆದರು ಶುಕ್ರವಾರ ಸಮಾರೋಪಗೊಂಡಿತು.
ಇದರ ಮರುದಿನವೇ ಸುದ್ದಿ ಬಂದಿದೆ, ಶಿಬಿರದಲ್ಲಿ ತರಬೇತಿ ಪಡೆದ ಯುವಕ ಗಣೇಶ್ ಪಣೆಮಜಲು ಎಂಬವರು ತೆಂಗಿನ ಕಾಯಿ ತೆಗೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಡಬದ ಅವರು ಈ ಹಿಂದೆಯೇ ಮರ ಏರುವ ಬಗ್ಗೆ ತಿಳಿದಿದ್ದರು. ಶಿಬಿರದಲ್ಲಿ ಅನುಭವ ಪಡೆದ ಬಳಿಕ ಇದೀಗ ಮತ್ತೆ ಧೈರ್ಯದಿಂದ ಮರ ಏರುವುದಕ್ಕೆ ಶುರು ಮಾಡಿದ್ದಾರೆ.
ಇದೀಗ ಪ್ರೇರಣೆ ಪಡೆದ ಇನ್ನೂ ಹಲವಾರು ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಗ್ರಾಮೀಣ ಭಾಗದಲ್ಲಿ ನುರಿತ ಕಾರ್ಮಿಕರ ತಯಾರು ಮಾಡುವುದು ಹಾಗೂ ಸ್ವ ಉದ್ಯೋಗಕ್ಕೆ ಅವಕಾಶ ನೀಡುವುದು ಈಗ ಮುಖ್ಯ ಉದ್ದೇಶವಾಗಿದೆ. ಇದೇ ಪ್ರೇರಣೆಯಲ್ಲಿ ಸುಳ್ಯ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಆಸಕ್ತಿಯನ್ನು ವಹಿಸಿವೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…