Advertisement
ಕೃಷಿ

ಶಿಬಿರದ ಮರುದಿನವೇ ಕೆಲಸದಲ್ಲಿ ತೊಡಗಿದ ಯುವಕ

Share

ಸುಳ್ಯ: ಅಡಿಕೆ  ಮರ ಏರುವ ತರಬೇತಿ ಶಿಬಿರದ ಮರುದಿನವೇ ಯುವಕನೊಬ್ಬ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಇದು ಪಂಜದಲ್ಲಿ ನಡೆದ ಅಡಿಕೆ ಮರ ಏರುವ ಶಿಬಿರದ ನಂತರದ ಮೊದಲ ಸುದ್ದಿ.

ಸಹಕಾರಿ ಸಂಘಗಳು ಮುಂಚೂಣಿಯಲ್ಲಿ  ನಿಂತು ಅಡಿಕೆ ಬೆಳೆಗಾರರ ರಕ್ಷಣೆಯ ಕಡೆಗೆ ಹೆಜ್ಜೆ ಇಟ್ಟಿವೆ. ಅಡಿಕೆ ಮರ ಏರುವ ತರಬೇತಿ ಮೂಲಕ ಸ್ವ ಉದ್ಯೋಗ, ಕೃಷಿ ರಕ್ಷಣೆಯ ಕಡೆಗೆ ಮನಸ್ಸು ಮಾಡಿದ್ದಾರೆ.  ಕಳೆದ ಡಿಸೆಂಬರ್ ತಿಂಗಳಲ್ಲಿ  ಕ್ಯಾಂಪ್ಕೋ ನೇತೃತ್ವದಲ್ಲಿ ವಿಟ್ಲ ಸಿಪಿಸಿಆರ್ ಐ ವಠಾರದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ” ಅಡಿಕೆ ಕೌಶಲ್ಯ ಪಡೆ ” ರಚನೆ ಆಗಿತ್ತು. ಅದೇ ಹುಮ್ಮಸ್ಸಿನಲ್ಲಿ ಮತ್ತೊಂದು ಶಿಬಿರ ನಡೆಯಿತು. ಎರಡೂ ಶಿಬಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದು ಇಡೀ ಜಿಲ್ಲೆಗೆ, ಅಡಿಕೆ ಬೆಳೆಗಾರರಿಗೆ ಉತ್ತಮ ಸಂದೇಶ ನೀಡಿತು. ಇದರ ಬೆನ್ನಲ್ಲೇ ಸಹಕಾರಿ ಸಂಘಗಳ ಮೂಲಕ ಜಿಲ್ಲೆಯಲ್ಲಿ ಇಂತಹ ಶಿಬಿರ ನಡೆಯುವ ಬಗ್ಗೆ ಯೋಚನೆ ಆರಂಭವಾಯಿತು. ಪೆರ್ಲದಲ್ಲಿ  ಸಹಕಾರಿ ಸಂಘದ ಮೂಲಕ  ಶಿ ಬಿರ ನಡೆದರೆ, ಈಗ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ಶಿಬಿರ ನಡೆದರು ಶುಕ್ರವಾರ ಸಮಾರೋಪಗೊಂಡಿತು.

Advertisement

ಇದರ ಮರುದಿನವೇ ಸುದ್ದಿ ಬಂದಿದೆ, ಶಿಬಿರದಲ್ಲಿ ತರಬೇತಿ ಪಡೆದ ಯುವಕ ಗಣೇಶ್ ಪಣೆಮಜಲು ಎಂಬವರು ತೆಂಗಿನ ಕಾಯಿ ತೆಗೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಡಬದ ಅವರು ಈ ಹಿಂದೆಯೇ ಮರ ಏರುವ ಬಗ್ಗೆ ತಿಳಿದಿದ್ದರು. ಶಿಬಿರದಲ್ಲಿ ಅನುಭವ ಪಡೆದ ಬಳಿಕ ಇದೀಗ ಮತ್ತೆ ಧೈರ್ಯದಿಂದ ಮರ ಏರುವುದಕ್ಕೆ ಶುರು ಮಾಡಿದ್ದಾರೆ.

ಇದೀಗ ಪ್ರೇರಣೆ ಪಡೆದ ಇನ್ನೂ ಹಲವಾರು ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಗ್ರಾಮೀಣ ಭಾಗದಲ್ಲಿ ನುರಿತ ಕಾರ್ಮಿಕರ ತಯಾರು ಮಾಡುವುದು  ಹಾಗೂ ಸ್ವ ಉದ್ಯೋಗಕ್ಕೆ ಅವಕಾಶ ನೀಡುವುದು  ಈಗ ಮುಖ್ಯ ಉದ್ದೇಶವಾಗಿದೆ. ಇದೇ ಪ್ರೇರಣೆಯಲ್ಲಿ  ಸುಳ್ಯ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಆಸಕ್ತಿಯನ್ನು ವಹಿಸಿವೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago