Advertisement
ಕೃಷಿ

ಶಿಬಿರದ ಮರುದಿನವೇ ಕೆಲಸದಲ್ಲಿ ತೊಡಗಿದ ಯುವಕ

Share

ಸುಳ್ಯ: ಅಡಿಕೆ  ಮರ ಏರುವ ತರಬೇತಿ ಶಿಬಿರದ ಮರುದಿನವೇ ಯುವಕನೊಬ್ಬ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಇದು ಪಂಜದಲ್ಲಿ ನಡೆದ ಅಡಿಕೆ ಮರ ಏರುವ ಶಿಬಿರದ ನಂತರದ ಮೊದಲ ಸುದ್ದಿ.

ಸಹಕಾರಿ ಸಂಘಗಳು ಮುಂಚೂಣಿಯಲ್ಲಿ  ನಿಂತು ಅಡಿಕೆ ಬೆಳೆಗಾರರ ರಕ್ಷಣೆಯ ಕಡೆಗೆ ಹೆಜ್ಜೆ ಇಟ್ಟಿವೆ. ಅಡಿಕೆ ಮರ ಏರುವ ತರಬೇತಿ ಮೂಲಕ ಸ್ವ ಉದ್ಯೋಗ, ಕೃಷಿ ರಕ್ಷಣೆಯ ಕಡೆಗೆ ಮನಸ್ಸು ಮಾಡಿದ್ದಾರೆ.  ಕಳೆದ ಡಿಸೆಂಬರ್ ತಿಂಗಳಲ್ಲಿ  ಕ್ಯಾಂಪ್ಕೋ ನೇತೃತ್ವದಲ್ಲಿ ವಿಟ್ಲ ಸಿಪಿಸಿಆರ್ ಐ ವಠಾರದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ” ಅಡಿಕೆ ಕೌಶಲ್ಯ ಪಡೆ ” ರಚನೆ ಆಗಿತ್ತು. ಅದೇ ಹುಮ್ಮಸ್ಸಿನಲ್ಲಿ ಮತ್ತೊಂದು ಶಿಬಿರ ನಡೆಯಿತು. ಎರಡೂ ಶಿಬಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದು ಇಡೀ ಜಿಲ್ಲೆಗೆ, ಅಡಿಕೆ ಬೆಳೆಗಾರರಿಗೆ ಉತ್ತಮ ಸಂದೇಶ ನೀಡಿತು. ಇದರ ಬೆನ್ನಲ್ಲೇ ಸಹಕಾರಿ ಸಂಘಗಳ ಮೂಲಕ ಜಿಲ್ಲೆಯಲ್ಲಿ ಇಂತಹ ಶಿಬಿರ ನಡೆಯುವ ಬಗ್ಗೆ ಯೋಚನೆ ಆರಂಭವಾಯಿತು. ಪೆರ್ಲದಲ್ಲಿ  ಸಹಕಾರಿ ಸಂಘದ ಮೂಲಕ  ಶಿ ಬಿರ ನಡೆದರೆ, ಈಗ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ಶಿಬಿರ ನಡೆದರು ಶುಕ್ರವಾರ ಸಮಾರೋಪಗೊಂಡಿತು.

ಇದರ ಮರುದಿನವೇ ಸುದ್ದಿ ಬಂದಿದೆ, ಶಿಬಿರದಲ್ಲಿ ತರಬೇತಿ ಪಡೆದ ಯುವಕ ಗಣೇಶ್ ಪಣೆಮಜಲು ಎಂಬವರು ತೆಂಗಿನ ಕಾಯಿ ತೆಗೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಡಬದ ಅವರು ಈ ಹಿಂದೆಯೇ ಮರ ಏರುವ ಬಗ್ಗೆ ತಿಳಿದಿದ್ದರು. ಶಿಬಿರದಲ್ಲಿ ಅನುಭವ ಪಡೆದ ಬಳಿಕ ಇದೀಗ ಮತ್ತೆ ಧೈರ್ಯದಿಂದ ಮರ ಏರುವುದಕ್ಕೆ ಶುರು ಮಾಡಿದ್ದಾರೆ.

ಇದೀಗ ಪ್ರೇರಣೆ ಪಡೆದ ಇನ್ನೂ ಹಲವಾರು ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಗ್ರಾಮೀಣ ಭಾಗದಲ್ಲಿ ನುರಿತ ಕಾರ್ಮಿಕರ ತಯಾರು ಮಾಡುವುದು  ಹಾಗೂ ಸ್ವ ಉದ್ಯೋಗಕ್ಕೆ ಅವಕಾಶ ನೀಡುವುದು  ಈಗ ಮುಖ್ಯ ಉದ್ದೇಶವಾಗಿದೆ. ಇದೇ ಪ್ರೇರಣೆಯಲ್ಲಿ  ಸುಳ್ಯ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಆಸಕ್ತಿಯನ್ನು ವಹಿಸಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

5 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

22 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago