Advertisement
ಕೃಷಿ

ಶಿಬಿರದ ಮರುದಿನವೇ ಕೆಲಸದಲ್ಲಿ ತೊಡಗಿದ ಯುವಕ

Share

ಸುಳ್ಯ: ಅಡಿಕೆ  ಮರ ಏರುವ ತರಬೇತಿ ಶಿಬಿರದ ಮರುದಿನವೇ ಯುವಕನೊಬ್ಬ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಇದು ಪಂಜದಲ್ಲಿ ನಡೆದ ಅಡಿಕೆ ಮರ ಏರುವ ಶಿಬಿರದ ನಂತರದ ಮೊದಲ ಸುದ್ದಿ.

ಸಹಕಾರಿ ಸಂಘಗಳು ಮುಂಚೂಣಿಯಲ್ಲಿ  ನಿಂತು ಅಡಿಕೆ ಬೆಳೆಗಾರರ ರಕ್ಷಣೆಯ ಕಡೆಗೆ ಹೆಜ್ಜೆ ಇಟ್ಟಿವೆ. ಅಡಿಕೆ ಮರ ಏರುವ ತರಬೇತಿ ಮೂಲಕ ಸ್ವ ಉದ್ಯೋಗ, ಕೃಷಿ ರಕ್ಷಣೆಯ ಕಡೆಗೆ ಮನಸ್ಸು ಮಾಡಿದ್ದಾರೆ.  ಕಳೆದ ಡಿಸೆಂಬರ್ ತಿಂಗಳಲ್ಲಿ  ಕ್ಯಾಂಪ್ಕೋ ನೇತೃತ್ವದಲ್ಲಿ ವಿಟ್ಲ ಸಿಪಿಸಿಆರ್ ಐ ವಠಾರದಲ್ಲಿ ಅಡಿಕೆ ಮರ ಏರುವ ತರಬೇತಿ ಶಿಬಿರ ” ಅಡಿಕೆ ಕೌಶಲ್ಯ ಪಡೆ ” ರಚನೆ ಆಗಿತ್ತು. ಅದೇ ಹುಮ್ಮಸ್ಸಿನಲ್ಲಿ ಮತ್ತೊಂದು ಶಿಬಿರ ನಡೆಯಿತು. ಎರಡೂ ಶಿಬಿರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದು ಇಡೀ ಜಿಲ್ಲೆಗೆ, ಅಡಿಕೆ ಬೆಳೆಗಾರರಿಗೆ ಉತ್ತಮ ಸಂದೇಶ ನೀಡಿತು. ಇದರ ಬೆನ್ನಲ್ಲೇ ಸಹಕಾರಿ ಸಂಘಗಳ ಮೂಲಕ ಜಿಲ್ಲೆಯಲ್ಲಿ ಇಂತಹ ಶಿಬಿರ ನಡೆಯುವ ಬಗ್ಗೆ ಯೋಚನೆ ಆರಂಭವಾಯಿತು. ಪೆರ್ಲದಲ್ಲಿ  ಸಹಕಾರಿ ಸಂಘದ ಮೂಲಕ  ಶಿ ಬಿರ ನಡೆದರೆ, ಈಗ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗುತ್ತಿಗಾರು ಮತ್ತು ಕಡಬ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಶ್ರಯದಲ್ಲಿ ಶಿಬಿರ ನಡೆದರು ಶುಕ್ರವಾರ ಸಮಾರೋಪಗೊಂಡಿತು.

ಇದರ ಮರುದಿನವೇ ಸುದ್ದಿ ಬಂದಿದೆ, ಶಿಬಿರದಲ್ಲಿ ತರಬೇತಿ ಪಡೆದ ಯುವಕ ಗಣೇಶ್ ಪಣೆಮಜಲು ಎಂಬವರು ತೆಂಗಿನ ಕಾಯಿ ತೆಗೆಯುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಕಡಬದ ಅವರು ಈ ಹಿಂದೆಯೇ ಮರ ಏರುವ ಬಗ್ಗೆ ತಿಳಿದಿದ್ದರು. ಶಿಬಿರದಲ್ಲಿ ಅನುಭವ ಪಡೆದ ಬಳಿಕ ಇದೀಗ ಮತ್ತೆ ಧೈರ್ಯದಿಂದ ಮರ ಏರುವುದಕ್ಕೆ ಶುರು ಮಾಡಿದ್ದಾರೆ.

ಇದೀಗ ಪ್ರೇರಣೆ ಪಡೆದ ಇನ್ನೂ ಹಲವಾರು ಸಹಕಾರಿ ಸಂಘಗಳೂ ಮುಂದೆ ಬಂದಿವೆ. ಗ್ರಾಮೀಣ ಭಾಗದಲ್ಲಿ ನುರಿತ ಕಾರ್ಮಿಕರ ತಯಾರು ಮಾಡುವುದು  ಹಾಗೂ ಸ್ವ ಉದ್ಯೋಗಕ್ಕೆ ಅವಕಾಶ ನೀಡುವುದು  ಈಗ ಮುಖ್ಯ ಉದ್ದೇಶವಾಗಿದೆ. ಇದೇ ಪ್ರೇರಣೆಯಲ್ಲಿ  ಸುಳ್ಯ ತಾಲೂಕಿನ ವಿವಿಧ ಸಹಕಾರಿ ಸಂಘಗಳು ಆಸಕ್ತಿಯನ್ನು ವಹಿಸಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

5 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago