ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿಯಲ್ಲಿ ಮಂಗಳವಾರ ನಡೆದ ಅಪಘಾತದಲ್ಲಿ ಕಾರು ಉರುಳಿ ಕಂದಕಕ್ಕೆ ಬಿದ್ದು, ಬೆಂಗಳೂರು ನಿವಾಸಿ ಸುನಿಲ್ ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಮೂಲದ ತಂಡ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಸಂದರ್ಭ ಮಂಗಳವಾರ ಮಧ್ಯಾಹ್ನ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಉರುಳಿದೆ. ಈ ಸಂದರ್ಭ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅತ್ಯಂತ ಅಪಾಯಕಾರಿಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕ ಕೆಲಸ ನಡೆಯುತ್ತಿರುವ ಜಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು, ಚಾಲಕರೂ ಅತಿವೇಗದಲ್ಲಿ ಹೋಗಬಾರದು ಎಂದು ಸಾರ್ವಜನಿಕರು ಹೇಳುತ್ತಿದ್ದರೂ, ಯಾರೂ ಕ್ಯಾರೆನ್ನುತ್ತಿಲ್ಲ. ಅಷ್ಟೇ ಅಲ್ಲ, ಈ ಜಾಗದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಗುಂಡಿ ತೋಡಲಾಗಿದ್ದು, ಬೈಕ್ ಸವಾರನೊಬ್ಬ ಇಲ್ಲೇ ಬಿದ್ದು ಗಾಯಗೊಂಡಿದ್ದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…