ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿಯಲ್ಲಿ ಮಂಗಳವಾರ ನಡೆದ ಅಪಘಾತದಲ್ಲಿ ಕಾರು ಉರುಳಿ ಕಂದಕಕ್ಕೆ ಬಿದ್ದು, ಬೆಂಗಳೂರು ನಿವಾಸಿ ಸುನಿಲ್ ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಮೂಲದ ತಂಡ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಸಂದರ್ಭ ಮಂಗಳವಾರ ಮಧ್ಯಾಹ್ನ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಉರುಳಿದೆ. ಈ ಸಂದರ್ಭ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅತ್ಯಂತ ಅಪಾಯಕಾರಿಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕ ಕೆಲಸ ನಡೆಯುತ್ತಿರುವ ಜಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು, ಚಾಲಕರೂ ಅತಿವೇಗದಲ್ಲಿ ಹೋಗಬಾರದು ಎಂದು ಸಾರ್ವಜನಿಕರು ಹೇಳುತ್ತಿದ್ದರೂ, ಯಾರೂ ಕ್ಯಾರೆನ್ನುತ್ತಿಲ್ಲ. ಅಷ್ಟೇ ಅಲ್ಲ, ಈ ಜಾಗದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಗುಂಡಿ ತೋಡಲಾಗಿದ್ದು, ಬೈಕ್ ಸವಾರನೊಬ್ಬ ಇಲ್ಲೇ ಬಿದ್ದು ಗಾಯಗೊಂಡಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…