ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿಯಲ್ಲಿ ಮಂಗಳವಾರ ನಡೆದ ಅಪಘಾತದಲ್ಲಿ ಕಾರು ಉರುಳಿ ಕಂದಕಕ್ಕೆ ಬಿದ್ದು, ಬೆಂಗಳೂರು ನಿವಾಸಿ ಸುನಿಲ್ ಎಂಬವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಮೂಲದ ತಂಡ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಸಂದರ್ಭ ಮಂಗಳವಾರ ಮಧ್ಯಾಹ್ನ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳಕ್ಕೆ ಉರುಳಿದೆ. ಈ ಸಂದರ್ಭ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಅತ್ಯಂತ ಅಪಾಯಕಾರಿಯಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕ ಕೆಲಸ ನಡೆಯುತ್ತಿರುವ ಜಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು, ಚಾಲಕರೂ ಅತಿವೇಗದಲ್ಲಿ ಹೋಗಬಾರದು ಎಂದು ಸಾರ್ವಜನಿಕರು ಹೇಳುತ್ತಿದ್ದರೂ, ಯಾರೂ ಕ್ಯಾರೆನ್ನುತ್ತಿಲ್ಲ. ಅಷ್ಟೇ ಅಲ್ಲ, ಈ ಜಾಗದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಗುಂಡಿ ತೋಡಲಾಗಿದ್ದು, ಬೈಕ್ ಸವಾರನೊಬ್ಬ ಇಲ್ಲೇ ಬಿದ್ದು ಗಾಯಗೊಂಡಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…