Advertisement
ವಿಶೇಷ ವರದಿಗಳು

ಶಿರಾಡಿ ಘಾಟಿ ಬ್ಲಾಕ್ : ಪದೇ ಪದೇ ಉಂಟಾಗುವ ಸಮಸ್ಯೆಗೆ ಪರಿಹಾರ ಏನು ?

Share

ಶಿರಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ  ರಸ್ತೆ ಬ್ಲಾಕ್ ಆಗಿದ್ದು ವಾಹನಗಳ ಸಾಲು ಸಾಲು ಕಂಡುಬಂದಿದೆ. ಶುಕ್ರವಾರ ಬೆಳಗ್ಗಿನವರೆಗೂ ರಸ್ತೆ ಬ್ಲಾಕ್ ಮುಂದುವರಿದಿದ್ದು , ರಸ್ತೆಯಲ್ಲಿ ಕಾರಿ ಕೆಟ್ಟು ನಿಂತು ಸಮಸ್ಯೆಯಾಗಿದೆ. ಇದೀಗ ಟ್ರಾಫಿಕ್ ಜಾಂ ಸರಿಯಾಗಿದ್ದು ಸುಗಮ ಸಂಚಾರ ಇದೆ. ಆದರೆ ಪದೇ ಪದೇ ಘಾಟಿ ರಸ್ತೆಯಲ್ಲಿ ಉಂಟಾಗುವ ಈ ಸಮಸ್ಯೆಗೆ ಪರಿಹಾರ ಏನು ?

Advertisement
Advertisement

ಕಳೆದ ಹಲವು ದಿನಗಳಿಂದ ಇದೇ ರೀತಿ ಪದೇಪದೇ ಬ್ಲಾಕ್ ಆಗುತ್ತಿದ್ದು ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಬೆಳಗಿನ ಜಾವ  ಮಂಗಳೂರು, ಸುಬ್ರಹ್ಮಣ್ಯ, ಪುತ್ತೂರು ತಲುಪಬೇಕಾದ ಬಸ್ಸುಗಳು ತಡವಾಗುತ್ತಿದೆ. ಹೀಗಾಗಿ ಪ್ರಯಾಣಿಕರು  ಸಂಕಷ್ಟ ಪಡುವಂತಾಗಿದೆ . ಇಂದು ಕೂಡಾ ಶಿರಾಡಿ ಘಾಟ್ ಬ್ಲಾಕ್ ಆಗಿ ಪ್ರಯಾಣಿಕರು ಪರದಾಟ ನಡೆಸುವಂತಾಯಿತು. ಬೆಳಗ್ಗೆ 5 ಗಂಟೆಗೆ ತಲುಪಬೇಕಾದ ಬಸ್ಸುಗಳು  ಬೆಳಗ್ಗೆ 8.30 ರ ಹೊತ್ತಿಗೆ ತಲಪಿದವು.

ಸಕಲೇಶಪುರ – ಗುಂಡ್ಯ ನಡುವೆ ಆಗಾಗ ರಸ್ತೆ ಬ್ಲಾಕ್ ಆಗುತ್ತಿದೆ. ಘನ ವಾಹನಗಳು ಕೆಟ್ಟು ನಿಲ್ಲುವುದು  ಹಾಗೂ ಸೈಡ್ ಗೆ ಹೋಗುವುರಿಂದ ಇತರ ವಾಹನಗಳ ಓಡಾಟಕ್ಕೆ ಕಷ್ಟವಾಗುತ್ತಿದೆ. ಬೆಳಗಿನ ಜಾವ ನೂರಾರು ಬಸ್ಸುಗಳು ಬೆಂಗಳೂರು ಕಡೆಯಿಂದ ಆಗಮಿಸುವ ವೇಳೆ ಒಮ್ಮೆಲೇ ರಸ್ತೆ ಬ್ಲಾಕ್ ಆಗುತ್ತಿದೆ. ಈ ರೀತಿಯಾಗಿ ಕಳೆದ ಹಲವು ದಿನಗಳಿಂದ ಸಮಸ್ಯೆಯಾಗುತ್ತಿದ್ದು ಜಿಲ್ಲಾಡಳಿತ , ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ಬೆಳಗಿನ ಜಾವ ಲಾರಿಗಳ ಓಡಾಟಕ್ಕೆ ತಡೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಬೆಳಗ್ಗೆ ಸುಬ್ರಹ್ಮಣ್ಯ ತಲುಪಬೇಕಾದ ಬಸ್ಸು ಇನ್ನೂ ಶಿರಾಡಿ ಘಾಟಿಯಲ್ಲಿಯೇ ಇದೆ. ನಿಧಾನವಾಗಿ ಚಲಿಸುತ್ತಿದೆ. ರಸ್ತೆ ಬ್ಲಾಕ್ ಆಗಿರುವುದು  ಸದ್ಯ ಸಮಸ್ಯೆಗೆ ಕಾರಣವಾಗಿದೆ. ಪದೇ ಪದೇ ಈ ರೀತಿ ಬ್ಲಾಕ್ ಆಗುತ್ತಿದೆ ಎಂದು ಬಸ್ಸು ಚಾಲಕ ಹೇಳುತ್ತಾರೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ ಎಂದು ಹೇಳುತ್ತಾರೆ ಪ್ರಯಾಣಿಕ ಶಂಕರ್ ಕುಮಾರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

10 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

10 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

10 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

10 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

10 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

20 hours ago