Advertisement
ವಿಶೇಷ ವರದಿಗಳು

ಶಿರಾಡಿ ಘಾಟಿ ಬ್ಲಾಕ್ : ಪದೇ ಪದೇ ಉಂಟಾಗುವ ಸಮಸ್ಯೆಗೆ ಪರಿಹಾರ ಏನು ?

Share

ಶಿರಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ  ರಸ್ತೆ ಬ್ಲಾಕ್ ಆಗಿದ್ದು ವಾಹನಗಳ ಸಾಲು ಸಾಲು ಕಂಡುಬಂದಿದೆ. ಶುಕ್ರವಾರ ಬೆಳಗ್ಗಿನವರೆಗೂ ರಸ್ತೆ ಬ್ಲಾಕ್ ಮುಂದುವರಿದಿದ್ದು , ರಸ್ತೆಯಲ್ಲಿ ಕಾರಿ ಕೆಟ್ಟು ನಿಂತು ಸಮಸ್ಯೆಯಾಗಿದೆ. ಇದೀಗ ಟ್ರಾಫಿಕ್ ಜಾಂ ಸರಿಯಾಗಿದ್ದು ಸುಗಮ ಸಂಚಾರ ಇದೆ. ಆದರೆ ಪದೇ ಪದೇ ಘಾಟಿ ರಸ್ತೆಯಲ್ಲಿ ಉಂಟಾಗುವ ಈ ಸಮಸ್ಯೆಗೆ ಪರಿಹಾರ ಏನು ?

ಕಳೆದ ಹಲವು ದಿನಗಳಿಂದ ಇದೇ ರೀತಿ ಪದೇಪದೇ ಬ್ಲಾಕ್ ಆಗುತ್ತಿದ್ದು ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಬೆಳಗಿನ ಜಾವ  ಮಂಗಳೂರು, ಸುಬ್ರಹ್ಮಣ್ಯ, ಪುತ್ತೂರು ತಲುಪಬೇಕಾದ ಬಸ್ಸುಗಳು ತಡವಾಗುತ್ತಿದೆ. ಹೀಗಾಗಿ ಪ್ರಯಾಣಿಕರು  ಸಂಕಷ್ಟ ಪಡುವಂತಾಗಿದೆ . ಇಂದು ಕೂಡಾ ಶಿರಾಡಿ ಘಾಟ್ ಬ್ಲಾಕ್ ಆಗಿ ಪ್ರಯಾಣಿಕರು ಪರದಾಟ ನಡೆಸುವಂತಾಯಿತು. ಬೆಳಗ್ಗೆ 5 ಗಂಟೆಗೆ ತಲುಪಬೇಕಾದ ಬಸ್ಸುಗಳು  ಬೆಳಗ್ಗೆ 8.30 ರ ಹೊತ್ತಿಗೆ ತಲಪಿದವು.

ಸಕಲೇಶಪುರ – ಗುಂಡ್ಯ ನಡುವೆ ಆಗಾಗ ರಸ್ತೆ ಬ್ಲಾಕ್ ಆಗುತ್ತಿದೆ. ಘನ ವಾಹನಗಳು ಕೆಟ್ಟು ನಿಲ್ಲುವುದು  ಹಾಗೂ ಸೈಡ್ ಗೆ ಹೋಗುವುರಿಂದ ಇತರ ವಾಹನಗಳ ಓಡಾಟಕ್ಕೆ ಕಷ್ಟವಾಗುತ್ತಿದೆ. ಬೆಳಗಿನ ಜಾವ ನೂರಾರು ಬಸ್ಸುಗಳು ಬೆಂಗಳೂರು ಕಡೆಯಿಂದ ಆಗಮಿಸುವ ವೇಳೆ ಒಮ್ಮೆಲೇ ರಸ್ತೆ ಬ್ಲಾಕ್ ಆಗುತ್ತಿದೆ. ಈ ರೀತಿಯಾಗಿ ಕಳೆದ ಹಲವು ದಿನಗಳಿಂದ ಸಮಸ್ಯೆಯಾಗುತ್ತಿದ್ದು ಜಿಲ್ಲಾಡಳಿತ , ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ಬೆಳಗಿನ ಜಾವ ಲಾರಿಗಳ ಓಡಾಟಕ್ಕೆ ತಡೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಬೆಳಗ್ಗೆ ಸುಬ್ರಹ್ಮಣ್ಯ ತಲುಪಬೇಕಾದ ಬಸ್ಸು ಇನ್ನೂ ಶಿರಾಡಿ ಘಾಟಿಯಲ್ಲಿಯೇ ಇದೆ. ನಿಧಾನವಾಗಿ ಚಲಿಸುತ್ತಿದೆ. ರಸ್ತೆ ಬ್ಲಾಕ್ ಆಗಿರುವುದು  ಸದ್ಯ ಸಮಸ್ಯೆಗೆ ಕಾರಣವಾಗಿದೆ. ಪದೇ ಪದೇ ಈ ರೀತಿ ಬ್ಲಾಕ್ ಆಗುತ್ತಿದೆ ಎಂದು ಬಸ್ಸು ಚಾಲಕ ಹೇಳುತ್ತಾರೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ ಎಂದು ಹೇಳುತ್ತಾರೆ ಪ್ರಯಾಣಿಕ ಶಂಕರ್ ಕುಮಾರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 hour ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

6 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

23 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago