ಸುಳ್ಯ: ಪ್ರೇಮ ವೈಫಲ್ಯದ ಕಾರಣದಿಂದ ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ ಬೆಂಗಳೂರು ಯುವಕರು ಕೈಜೋಡಿಸಿದರು. ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.
ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್ ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.
ಶಿವಗಂಗೆ ಬೆಟ್ಟವು ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು ತುಮಕೂರಿನಿಂದ 20 ಕಿಮೀ ದೂರದಲ್ಲಿದೆ. ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…