Advertisement
ನಮ್ಮೂರ ಸುದ್ದಿ

ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

Share

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

8 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

9 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

16 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

22 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

22 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago