ಸುಳ್ಯ: ಪ್ರೇಮ ವೈಫಲ್ಯದ ಕಾರಣದಿಂದ ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.
ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ ಬೆಂಗಳೂರು ಯುವಕರು ಕೈಜೋಡಿಸಿದರು. ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.
ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್ ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.
ಶಿವಗಂಗೆ ಬೆಟ್ಟವು ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು ತುಮಕೂರಿನಿಂದ 20 ಕಿಮೀ ದೂರದಲ್ಲಿದೆ. ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…