ಸುಳ್ಯ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಡಿ ದರ್ಜೆ ನೌಕರರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಅ.31ರಂದು ನಿವೃತ್ತಿಯಾಗಲಿರುವ ಅಚ್ಯುತ ಎ.ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಕೆ.ಎಂ. ಅಧ್ಯಕ್ಷತೆ ವಹಿಸಿದ್ದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಬೆಳ್ಯಪ್ಪ ಗೌಡ, ಸರಸ್ವತಿ, ನಾರಾಯಣ ನೀರಬಿದಿರೆ, ಸುಕನ್ಯ ಅತಿಥಿಯಾಗಿದ್ದರು.
ಶಾಲು ಹೊದಿಸಿ, ಸ್ಮರಣಿಕೆ, ಚಿನ್ನದ ಉಂಗುರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆಯ ಮೇಲ್ವಿಚಾರಕಿ ಶೈಲಜಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ರವಿಶ್ರೀ ವಂದಿಸಿದರು.
ಇಲಾಖೆಯ ಮೇಲ್ವಿಚಾರಕಿಯರು, ಸಿಬ್ಬಂದಿ ವರ್ಗದವರು, ನಿವೃತ್ತ ಸಿಬ್ಬಂದಿಗಳು, ಸ್ತ್ರೀ ಶಕ್ತಿ ಸಹಕಾರಿ ಸಂಘದ ಅಧ್ಯಕ್ಷರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…