ಸುಳ್ಯ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಡಿ ದರ್ಜೆ ನೌಕರರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಅ.31ರಂದು ನಿವೃತ್ತಿಯಾಗಲಿರುವ ಅಚ್ಯುತ ಎ.ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಕೆ.ಎಂ. ಅಧ್ಯಕ್ಷತೆ ವಹಿಸಿದ್ದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಬೆಳ್ಯಪ್ಪ ಗೌಡ, ಸರಸ್ವತಿ, ನಾರಾಯಣ ನೀರಬಿದಿರೆ, ಸುಕನ್ಯ ಅತಿಥಿಯಾಗಿದ್ದರು.
ಶಾಲು ಹೊದಿಸಿ, ಸ್ಮರಣಿಕೆ, ಚಿನ್ನದ ಉಂಗುರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆಯ ಮೇಲ್ವಿಚಾರಕಿ ಶೈಲಜಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ರವಿಶ್ರೀ ವಂದಿಸಿದರು.
ಇಲಾಖೆಯ ಮೇಲ್ವಿಚಾರಕಿಯರು, ಸಿಬ್ಬಂದಿ ವರ್ಗದವರು, ನಿವೃತ್ತ ಸಿಬ್ಬಂದಿಗಳು, ಸ್ತ್ರೀ ಶಕ್ತಿ ಸಹಕಾರಿ ಸಂಘದ ಅಧ್ಯಕ್ಷರು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…