ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…