ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…