ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…