ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…