ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…