ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…