ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…