ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು ನೇಕಾರಿಕೆಯಂತಹ ಸ್ವ ಉದ್ಯೋಗದ ಮೂಲಕ ಸ್ವಾವಲಂಬನೆಯ ಹಾದಿಯಲ್ಲಿ ಸಾಗುವಂತೆ ಮಾಡುವ ಹಾಗೂ ಸಮಾಜದ ಕೆಳಸ್ತರದ ಸಮಾಜವನ್ನ ಸಬಲೀಕರಣ ಮಾಡುದ ಉದ್ದೇಶದಿಂದ ಈ ಸಂಘ ಸ್ಥಾಪನೆಯಾಗಲಿದೆ. ತಾಲೂಕಿನಲ್ಲಿ ಸದ್ಯವೇ ಈ ಸಂಘವು ಆರಂಭವಾಗಲಿದ್ದು ಈ ಸಂದರ್ಭ ಸಮಾಜದ 5 ಮಂದಿ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಹೇಳಿದರು. ಸಂಘದ ಬಗ್ಗೆ ಆಸಕ್ತರು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಸಂದರ್ಭ ಮಾತನಾಡಿದ ತಾಂತ್ರಿಕ ಸಲಹೆಗಾರ ಎ.ಕೆ.ಹಿಮಕರ, ಸರಿಯಾದ ಕಚ್ಚಾವಸ್ತುಗಳ ಕೊರತೆಯಿಂದ ಕಸುಬುಗಳು ಕ್ಷೀಣಿಸುತ್ತಾ ಬರುತ್ತಿದೆ. ಅದಕ್ಕೆ ಅಂತವರಿಗೆ ಪರ್ಯಾಯವಾಗಿ ಅಭಿವೃದ್ಧಿ ಆಧಾರಿತ ಹೊಸ ವೃತ್ತಿ ಕೈಗೊಳ್ಳಲು ಇಂತಹ ಸಹಕಾರಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುತ್ರ ಮೊಗ್ರ, ದೇವಪ್ಪ ದೇವ ಉಪಸ್ಥಿತರಿದ್ದ ರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…