Advertisement
ಜಿಲ್ಲೆ

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನಾ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Share

ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ವತಿಯಿಂದ ನೂತನವಾಗಿ ನಿರ್ಮಿಸಲ್ಪಟ್ಟ ಅಂಬಿಕಾ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭವು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರಿಂದ ಮೇ.31 ರಂದು ಉದ್ಘಾಟನೆಗೊಳ್ಳಲಿದೆ.

ಅದೇ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು  ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಗುರುವಂದನಾ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.  ಗುರುವಂದನಾ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಎನ್.ಕೆ.ಜಗನ್ನಿವಾಸ ರಾವ್  ಮಾತನಾಡಿದರು.

ಗುರುವಂದನಾ ಕಾರ್ಯಕ್ರಮ ಸಮಿತಿ ಕಾರ್ಯವಾಹಕರಾಗಿರುವ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ನಟ್ಟೋಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕಾರ್ಯವಾಹಕ ಕೆ ಸುರೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಮಿತಿ ಕೋಶಾಧಿಕಾರಿ ಪಿ.ಸತೀಶ್ ರಾವ್ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

3 minutes ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

16 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago