ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ವತಿಯಿಂದ ನೂತನವಾಗಿ ನಿರ್ಮಿಸಲ್ಪಟ್ಟ ಅಂಬಿಕಾ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭವು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರಿಂದ ಮೇ.31 ರಂದು ಉದ್ಘಾಟನೆಗೊಳ್ಳಲಿದೆ.
ಅದೇ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.
ಗುರುವಂದನಾ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಗುರುವಂದನಾ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಎನ್.ಕೆ.ಜಗನ್ನಿವಾಸ ರಾವ್ ಮಾತನಾಡಿದರು.
ಗುರುವಂದನಾ ಕಾರ್ಯಕ್ರಮ ಸಮಿತಿ ಕಾರ್ಯವಾಹಕರಾಗಿರುವ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ನಟ್ಟೋಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಕಾರ್ಯವಾಹಕ ಕೆ ಸುರೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಮಿತಿ ಕೋಶಾಧಿಕಾರಿ ಪಿ.ಸತೀಶ್ ರಾವ್ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…