Advertisement

ಶೋಧಿಸಿದ್ದು ಲೋಡ್ ಗಟ್ಟಲೆ ಪ್ಲಾಸ್ಟಿಕ್ ತ್ಯಾಜ್ಯ.!

Share

ಸುಳ್ಯ: ಸ್ವಚ್ಛ ಸುಳ್ಯ ತಂಡ ಮತ್ತು ಹೈ ಟೊರ್ಕ್ ಕ್ರೆವ್ ಗ್ರೂಪ್ ಸಹಭಾಗಿತ್ವದಲ್ಲಿ ಸುಳ್ಯ ನಗರದಲ್ಲಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ಶೋಧನಾ ಜಾಥಾದಲ್ಲಿ ಸಂಗ್ರಹಿಸಿದ್ದು ಲೋಡ್ ಗಟ್ಟಲೆ ಪ್ಲಾಸ್ಟಿಕ್ ತ್ಯಾಜ್ಯ…!.

ಚೆನ್ನಕೇಶವ ದೇವಾಲಯದ ಆವರಣದಿಂದ ಆರಂಭಗೊಂಡ ದ್ವಿಚಕ್ರ ವಾಹನ ಜಾಥಾದ ಮೂಲಕ ನಗರದ ಮೂಲೆ ಮೂಲೆಗಳಲ್ಲಿ ಸೇರಿಕೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ತಂದು ವಿಲೇವಾರಿ ಮಾಡಲಾಯಿತು.

Advertisement

ಸುಮಾರು 50 ಕ್ಕಿಂತ ಹೆಚ್ಚಿನ ಬೈಕ್ ಸವಾರರು ಎಡೆ ಬಿಡದೆ ಸುರಿದ ಮಳೆಯನ್ನೂ ಲೆಕ್ಕಿಸದೆ ಸುಳ್ಯ ನಗರದ ಮುಖ್ಯ ರಸ್ತೆಗಳಲ್ಲಿ ಮತ್ತು ಒಳ ರಸ್ತೆಗಳಲ್ಲಿ ಸಂಚರಿಸಿ ದಾರಿಯುದ್ದಕ್ಕೂ ಬಿದ್ದಿದ್ದ ರಾಶಿ ಗಟ್ಟಲೆ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ತಂದರು. ಬೆಳಿಗ್ಗೆ 10 ರಿಂದ ಆರಂಭಗೊಂಡು ಮಧ್ಯಾಹ್ನ ಎರಡು ಗಂಟೆಯವರೆಗೂ ಮುಂದುವರಿದ ಕಾರ್ಯಾಚರಣೆಯಲ್ಲಿ ಸುಮಾರು ನಾಲ್ಕು ಲೋಡ್ ಗಿಂತಲೂ ಹೆಚ್ಚು ಪ್ಲಾಸ್ಟಿಕ್ ಸಂಗ್ರಹಿಸಲಾಯಿತು.
ಪ್ಲಾಸ್ಟಿಕನ್ನು ಶೋಧಿಸಿ ತಂದು
ವಿಲೇವಾರಿ ಮಾಡುವ ಮೂಲಕ ಜನರಲ್ಲಿ ಮುಂದೆ ಪ್ಲಾಸ್ಟಿಕ್ ಉಪಯೋಗಿದಂತೆ ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ಚಳುವಳಿ ಇದಾಗಿತ್ತು.
ಸುಳ್ಯ ನಗರದಲ್ಲಿ ಆ.15ರಿಂದ ಪ್ಲಾಸ್ಟಿಕ್ ನಿಷೇಧ ಜಾರಿಗೆ ತರಲು ನಿರ್ಧರಿಸಲಾಗಿದ್ದು ಈ ಹಿನ್ನಲೆಯಲ್ಲಿ
ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದ ಜಾಥಾದಲ್ಲಿ ಸುಳ್ಯ ಎಸ್ಐ ಎಂ.ಆರ್.ಹರೀಶ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ, ವಕೀಲ ಕೆ.ಎಲ್.ಪ್ರದೀಪ್ ಕುಮಾರ್, ಡಿ.ಎಸ್. ಗಿರೀಶ್, ಕೆ.ಆರ್. ಮನಮೋಹನ್, ಸುಂದರ ರಾವ್, ರಾ‌ಮಚಂದ್ರ. ಪಿ, ಡಿ.ಎಂ ಶಾರೀಖ್, ನ.ಪಂ. ಸದಸ್ಯರಾದ ಶರೀಪ್ ಕಂಠಿ, ಬುದ್ಧ ನಾಯ್ಕ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ, ಯುವ ಬ್ರಿಗೇಡ್‌ನ ಶರತ್ ಪರಿವಾರ್, ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್‌ನ ಮಯೂರ್, ಕೌಶಲ್, ದೀಕ್ಷಿತ್ ರಾವ್, ಸಂಪ್ರೀತ್, ಸಚಿನ್, ಸನತ್ ಮತ್ತಿತರರು ಕೈ ಜೋಡಿಸಿದರು. ಕೆಲ ಹೊತ್ತು ಮೂರು ಮಂದಿ ವಿದೇಶಿ ಪ್ರವಾಸಿಗರು ಕೂಡ ತಂಡಕ್ಕೆ ಸಾಥ್ ನೀಡಿ ಗಮನ ಸೆಳೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 hour ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 hour ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

9 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

11 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

11 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

11 hours ago