ರಾಜ್ಯದ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಯಂಸೇವಕರಿಂದ ನಡೆಯಿತು. ಈ ಸ್ವಚ್ಛತಾ ಕಾರ್ಯ ನಿರಂತರವಾಗಿ ಭಕ್ತರಿಂದಲೂ ನಡೆಯಲಿ, ನಡೆಯಬೇಕು….
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಆ. 8 ರಿಂದ 15 ರ ವರೆಗೆ ರಾಜ್ಯದೆಲ್ಲೆಡೆ 9916 ಶ್ರದ್ಧಾ ಕೇಂದ್ರಗಳಲ್ಲಿ ನಡೆದ ಸ್ಚಚ್ಛತಾ ಅಭಿಯಾನದಲ್ಲಿ 3,56,840 ಸ್ವಯಂ ಸೇವಕರು ಭಾಗವಹಿಸಿ ಅಭಿಯಾನ ಯಶಸ್ವಿಗೊಳಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್.ಮಂಜುನಾಥ್ ಮತ್ತು ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಸ್ವಚ್ಛತಾ ಅಭಿಯಾನದಲ್ಲಿ 9476 ದೇವಸ್ಥಾನಗಳು, 15 ಬಸದಿಗಳು, 37 ಚರ್ಚ್ಗಳು, 184 ಮಸೀದಿಗಳು ಹಾಗೂ 204 ಇತರ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾಸರಗೋಡು ಸೇರಿದಂತೆ ರಾಜ್ಯದ ಒಟ್ಟು 31 ಜಿಲ್ಲೆಗಳಲ್ಲಿ ಸ್ಚಚ್ಛತಾ ಅಭಿಯಾನ ನಡೆಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿಅತಿ ಹೆಚ್ಚು (1020) ಶ್ರದ್ಧಾಕೇಂದ್ರಗಳಲ್ಲಿ ಸ್ಚಚ್ಛತಾ ಅಭಿಯಾನ ನಡೆಸಿದ್ದು ಗರಿಷ್ಠ ಸಂಖ್ಯೆಯಲ್ಲಿ (34,543) ಸ್ವಯಂ ಸೇವಕರು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 2017 ರಿಂದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಪ್ರಾರಂಭಿಸಿದ್ದು ಪ್ರತಿವರ್ಷ ಆ. 8 ರಿಂದ 15 ರ ವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಛತಾಅಭಿಯಾನ ನಡೆಸಲಾಗುತ್ತದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…