Advertisement
Categories: Uncategorized

ಶ್ರೀಕೃಷ್ಣನ ಕೆಲಸಗಳೇ ವಿಶ್ವ ಹಿಂದೂ ಪರಿಷತ್ ಗೆ ಆದರ್ಶ- ಶರಣ್ ಪಂಪ್ ವೆಲ್

Share

ಸುಳ್ಯ: ಸಮಾಜವನ್ನೂ, ದೇಶವನ್ನೂ, ಮಾತೆಯರನ್ನೂ, ಗೋಮಾತೆಯನ್ನೂ ರಕ್ಷಿಸಲು ಶ್ರೀಕೃಷ್ಣ ಅಂದು ಮಾಡಿದ್ದ ಕೆಲಸಗಳನ್ನು ಇಂದು ವಿಶ್ಚ ಹಿಂದೂ ಪರಿಷತ್ ಮತ್ತು ಭಜರಂಗದಳ ಮಾಡುತ್ತಿದೆ. ಶ್ರೀಕೃಷ್ಣ ಜಯಂತಿಯಂದು ಆರಂಭಗೊಂಡ ವಿ.ಹಿಂ.ಪ ಭಜರಂಗದಳ ಸಂಘಟನೆಗಳಿಗೆ ಶ್ರೀಕೃಷ್ಣನ ಕೆಲಸಗಳೇ ಆದರ್ಶ ಎಂದು ವಿಶ್ವ ಹಿಂದೂ ಪರಿಷತ್ ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ಆರನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು‌.

ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕೆ.ಎಸ್‌‌.ಗೋಪಾಲಕೃಷ್ಣ ಕರೋಡಿ ಅಧ್ಯಕ್ಷತೆ ವಹಿಸಿದ್ದರು.
ವಿ.ಹಿಂ.ಪ ಪುತ್ತೂರು ಜೆಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಭಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್, ಸುಳ್ಯಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ವಿ.ಹಿಂ.ಪ ಸುಳ್ಯ ಪ್ರಖಂಡ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ವಿ.ಹಿಂ.ಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್, ಮೊಸರು ಕುಡಿಕೆ ಉತ್ಸವ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ಪಿ.ರಂಜಿತ್ ಕುಮಾರ್, ಮಾತೃಶಕ್ತಿ ಪ್ರಮುಖ್ ಬಿ.ಲೀಲಾವತಿ ಬಳ್ಳಡ್ಕ, ದುರ್ಗಾವಾಹಿನಿ ಸಂಯೋಜಕಿ ನಮಿತ ಪ್ರವೀಣ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲತೀಶ್ ಗುಂಡ್ಯ ಸ್ವಾಗತಿಸಿ, ಭಜರಂಗದಳ ಸಂಯೋಜಕ್ ನಿಕೇಶ್ ಉಬರಡ್ಕ ವಂದಿಸಿದರು. ಶ್ರೀದೇವಿ ನಾಗರಾಜ ಭಟ್ ಮತ್ತು ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 day ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago