ಸುಳ್ಯ: ಸಮಾಜವನ್ನೂ, ದೇಶವನ್ನೂ, ಮಾತೆಯರನ್ನೂ, ಗೋಮಾತೆಯನ್ನೂ ರಕ್ಷಿಸಲು ಶ್ರೀಕೃಷ್ಣ ಅಂದು ಮಾಡಿದ್ದ ಕೆಲಸಗಳನ್ನು ಇಂದು ವಿಶ್ಚ ಹಿಂದೂ ಪರಿಷತ್ ಮತ್ತು ಭಜರಂಗದಳ ಮಾಡುತ್ತಿದೆ. ಶ್ರೀಕೃಷ್ಣ ಜಯಂತಿಯಂದು ಆರಂಭಗೊಂಡ ವಿ.ಹಿಂ.ಪ ಭಜರಂಗದಳ ಸಂಘಟನೆಗಳಿಗೆ ಶ್ರೀಕೃಷ್ಣನ ಕೆಲಸಗಳೇ ಆದರ್ಶ ಎಂದು ವಿಶ್ವ ಹಿಂದೂ ಪರಿಷತ್ ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆದ ಆರನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.
ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಕರೋಡಿ ಅಧ್ಯಕ್ಷತೆ ವಹಿಸಿದ್ದರು.
ವಿ.ಹಿಂ.ಪ ಪುತ್ತೂರು ಜೆಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಭಜರಂಗದಳ ವಿಭಾಗ ಸಂಯೋಜಕ ಭುಜಂಗ ಕುಲಾಲ್, ಸುಳ್ಯಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ವಿ.ಹಿಂ.ಪ ಸುಳ್ಯ ಪ್ರಖಂಡ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ, ವಿ.ಹಿಂ.ಪ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಸತೀಶ್, ಮೊಸರು ಕುಡಿಕೆ ಉತ್ಸವ ಸಮಿತಿಯ ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ಪಿ.ರಂಜಿತ್ ಕುಮಾರ್, ಮಾತೃಶಕ್ತಿ ಪ್ರಮುಖ್ ಬಿ.ಲೀಲಾವತಿ ಬಳ್ಳಡ್ಕ, ದುರ್ಗಾವಾಹಿನಿ ಸಂಯೋಜಕಿ ನಮಿತ ಪ್ರವೀಣ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲತೀಶ್ ಗುಂಡ್ಯ ಸ್ವಾಗತಿಸಿ, ಭಜರಂಗದಳ ಸಂಯೋಜಕ್ ನಿಕೇಶ್ ಉಬರಡ್ಕ ವಂದಿಸಿದರು. ಶ್ರೀದೇವಿ ನಾಗರಾಜ ಭಟ್ ಮತ್ತು ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…