Advertisement
ಧಾರ್ಮಿಕ

ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ನಾಳೆ ‘ಅಮಾವಾಸ್ಯೆ ದೀಪೋತ್ಸವ’

Share

ಮಡಿಕೇರಿ : ಜಿಲ್ಲಾ ಕೇಂದ್ರ ಮಡಿಕೇರಿ ನಗರದಂಚಿನ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ದೀಪಗಳ ಹಬ್ಬ ದೀಪಾವಳಿಯ ಪ್ರಯುಕ್ತ ಅ.28ರಂದು ರಾತ್ರಿ ‘ಅಮಾವಾಸ್ಯೆ ದೀಪೋತ್ಸವ’ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿಗಳಾದ ಗೋವಿಂದ ಸ್ವಾಮಿ ತಿಳಿಸಿದ್ದಾರೆ.

ಅ.28 ರಂದು ರಾತ್ರಿ 7 ಗಂಟೆಗೆ ಕಳಸ ಪೂಜೆ, ರಾತ್ರಿ 8 ಗಂಟೆಗೆ ಅನ್ನದಾನ, ಪ್ರಸಾದ ವಿನಿಯೋಗ ಹಾಗೂ ರಾತ್ರಿ 9 ಗಂಟೆಗೆ ತಾಯಿಯ ದರ್ಶನ ನಡೆಯಲಿದ್ದು, ರಾತ್ರಿ 9.30ಕ್ಕೆ ದೀಪೋತ್ಸವ ಪ್ರಾರಂಭವಾಗಲಿದೆ.

ದೀಪೋತ್ಸವ ದಿನದಂದು ನೈವೇದ್ಯ ಪ್ರಸಾದ, ಅನ್ನದಾನ, ದೇವಸ್ಥಾನದ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರಗಳನ್ನು ಮಾಡಲಿಚ್ಛಿಸುವವರು ಖುದ್ದಾಗಿ ದೇವಾಲಯದ ಆಡಳಿತ ಕಚೇರಿಯಲ್ಲಿ ವಿಚಾರಿಸುವಂತೆ ಮನವಿ ಮಾಡಿದ್ದಾರೆ.

ಅಂದು ಭಕ್ತಾದಿಗಳು ಗ್ರಹದೋಷ ಪರಿಹಾರಕ್ಕೋಸ್ಕರ 108 ಎಳ್ಳು ಬತ್ತಿಯನ್ನು ದೇವಸ್ಥಾನದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗುವ ನಂಬಿಕೆ ಹಿಂದಿನಿಂದಲೂ ಇದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಳ್ಳುಬತ್ತಿಯನ್ನು ಹಚ್ಚುವ ಮೂಲಕ ದೀಪೋತ್ಸವ ನಡೆಯಲಿದೆ.

ಶ್ರೀ ರಾಜರಾಜೇಶ್ವರಿ ದೇವಿಯ ಭಕ್ತರು ಹಾಗೂ ಮೂಡಾ ಅಧ್ಯಕ್ಷರಾದ ಚುಮ್ಮಿದೇವಯ್ಯ ಮಾತನಾಡಿ, ಅಮವಾಸ್ಯೆ ದೀಪೋತ್ಸವದ ಪ್ರಯುಕ್ತ ದೇವಾಲಯದ ಆಡಳಿತ ಮಂಡಳಿಯ ಸಹಕಾರದಿಂದ ತಾಯಿಯ ಗರ್ಭಗುಡಿ ಸುಂದರವಾಗಿ ಅಲಂಕೃತಗೊಳಿಸಲಾಗಿದ್ದು, ಈ ಬಾರಿ ವಿಶೇಷವಾಗಿ ಗರ್ಭಗುಡಿಯ ಬಾಗಿಲನ್ನು ಬೆಳ್ಳಿಯ ಹೊದಿಕೆಯಿಂದ ಅಲಂಕರಿಸಲಾಗಿದೆ. ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ ಎಂದು ಗೋವಿಂದ ಸ್ವಾಮಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08272 224668, 223313, 94807 30523 ನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

9 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

14 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

15 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

17 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

18 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago