Advertisement
ಧಾರ್ಮಿಕ

ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ನಾಳೆ ‘ಅಮಾವಾಸ್ಯೆ ದೀಪೋತ್ಸವ’

Share

ಮಡಿಕೇರಿ : ಜಿಲ್ಲಾ ಕೇಂದ್ರ ಮಡಿಕೇರಿ ನಗರದಂಚಿನ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ದೀಪಗಳ ಹಬ್ಬ ದೀಪಾವಳಿಯ ಪ್ರಯುಕ್ತ ಅ.28ರಂದು ರಾತ್ರಿ ‘ಅಮಾವಾಸ್ಯೆ ದೀಪೋತ್ಸವ’ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿಗಳಾದ ಗೋವಿಂದ ಸ್ವಾಮಿ ತಿಳಿಸಿದ್ದಾರೆ.

ಅ.28 ರಂದು ರಾತ್ರಿ 7 ಗಂಟೆಗೆ ಕಳಸ ಪೂಜೆ, ರಾತ್ರಿ 8 ಗಂಟೆಗೆ ಅನ್ನದಾನ, ಪ್ರಸಾದ ವಿನಿಯೋಗ ಹಾಗೂ ರಾತ್ರಿ 9 ಗಂಟೆಗೆ ತಾಯಿಯ ದರ್ಶನ ನಡೆಯಲಿದ್ದು, ರಾತ್ರಿ 9.30ಕ್ಕೆ ದೀಪೋತ್ಸವ ಪ್ರಾರಂಭವಾಗಲಿದೆ.

ದೀಪೋತ್ಸವ ದಿನದಂದು ನೈವೇದ್ಯ ಪ್ರಸಾದ, ಅನ್ನದಾನ, ದೇವಸ್ಥಾನದ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರಗಳನ್ನು ಮಾಡಲಿಚ್ಛಿಸುವವರು ಖುದ್ದಾಗಿ ದೇವಾಲಯದ ಆಡಳಿತ ಕಚೇರಿಯಲ್ಲಿ ವಿಚಾರಿಸುವಂತೆ ಮನವಿ ಮಾಡಿದ್ದಾರೆ.

ಅಂದು ಭಕ್ತಾದಿಗಳು ಗ್ರಹದೋಷ ಪರಿಹಾರಕ್ಕೋಸ್ಕರ 108 ಎಳ್ಳು ಬತ್ತಿಯನ್ನು ದೇವಸ್ಥಾನದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗುವ ನಂಬಿಕೆ ಹಿಂದಿನಿಂದಲೂ ಇದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಳ್ಳುಬತ್ತಿಯನ್ನು ಹಚ್ಚುವ ಮೂಲಕ ದೀಪೋತ್ಸವ ನಡೆಯಲಿದೆ.

ಶ್ರೀ ರಾಜರಾಜೇಶ್ವರಿ ದೇವಿಯ ಭಕ್ತರು ಹಾಗೂ ಮೂಡಾ ಅಧ್ಯಕ್ಷರಾದ ಚುಮ್ಮಿದೇವಯ್ಯ ಮಾತನಾಡಿ, ಅಮವಾಸ್ಯೆ ದೀಪೋತ್ಸವದ ಪ್ರಯುಕ್ತ ದೇವಾಲಯದ ಆಡಳಿತ ಮಂಡಳಿಯ ಸಹಕಾರದಿಂದ ತಾಯಿಯ ಗರ್ಭಗುಡಿ ಸುಂದರವಾಗಿ ಅಲಂಕೃತಗೊಳಿಸಲಾಗಿದ್ದು, ಈ ಬಾರಿ ವಿಶೇಷವಾಗಿ ಗರ್ಭಗುಡಿಯ ಬಾಗಿಲನ್ನು ಬೆಳ್ಳಿಯ ಹೊದಿಕೆಯಿಂದ ಅಲಂಕರಿಸಲಾಗಿದೆ. ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ ಎಂದು ಗೋವಿಂದ ಸ್ವಾಮಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08272 224668, 223313, 94807 30523 ನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

2 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

3 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

4 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

7 hours ago