ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.
ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.
ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…