ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.
ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.
ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…