ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.
ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.
ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…