ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.
ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.
ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…