ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.
ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.
ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…