ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.
ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.
ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…