ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.
ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…