Advertisement
ಧಾರ್ಮಿಕ

ಶ್ರೀ ಚಕ್ರದ ಮಹತ್ವ ಬಗ್ಯೆ ಉಪನ್ಯಾಸ

Share

ಧರ್ಮಸ್ಥಳ : ಸಮಗ್ರ ಸೃಷ್ಟಿಯೇ ಚಲನಶೀಲವಾಗಿದ್ದು ಚಲನೆಯ ಸಮಗ್ರ ತತ್ವ ಬಳಸಿ ಶ್ರೀಚಕ್ರ ರಚಿಸಲಾಗುತ್ತದೆ. ಪ್ರಕೃತಿಯಲ್ಲಿರುವ ಪಂಚಭೂತಗಳಲ್ಲಿಯೂ ದೇವರನ್ನು ಕಾಣುವ ನಾವು ಸಾಮಾನ್ಯವಾಗಿ ವಿಗ್ರಹ, ಮಂಡಲ ಮತ್ತು ಅಗ್ನಿ ಮೂಲಕ ಭಗವಂತನ ಆರಾಧನೆ ಮಾಡುತ್ತೇವೆ ಎಂದು ಕಾಸರಗೋಡಿನ ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ ಹೇಳಿದರು.

ಅವರು ಶನಿವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಶ್ರೀಚಕ್ರದ ಮಹತ್ವದ ಬಗ್ಯೆ ಉಪನ್ಯಾಸ ನೀಡಿದರು. ಭಗವಂತನ ಆರಾಧನೆಗೆ ಮಂಡಲಗಳನ್ನು ರಚಿಸುತ್ತಾರೆ. ಆರಾಧನೆ ಮತ್ತು ರಕ್ಷಣೆಗಾಗಿ ಯಂತ್ರಗಳನ್ನು ಬಳಸುತ್ತಾರೆ. ಶ್ರೀಚಕ್ರದಲ್ಲಿ ಬೇರೆ ಬೇರೆ ವಿನ್ಯಾಸಗಳಿವೆ.ಶ್ರೀಚಕ್ರ ವೃತ್ತಾಕಾರದ ರಚನೆಯಿಂದ ಕೂಡಿದ್ದು ಒಂಬತ್ತು ಆವರಣಗಳಿರುತ್ತವೆ. ಶ್ರೀಚಕ್ರ ಆರಾಧನೆ ಅತ್ಯಂತ ಶ್ರೇಷ್ಠವಾಗಿದ್ದು ಬಿಂದುವಿನಿಂದ ಆರಂಭಿಸಿ ಶ್ರೀಚಕ್ರ ರಚನೆ ಮಾಡುತ್ತಾರೆ ಎಂದು ಹೇಳಿ ಶ್ರೀಚಕ್ರ ಆರಾಧನೆಯ ಮಹತ್ವವನ್ನು ವಿವರಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

3 minutes ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

43 minutes ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

8 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

14 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

14 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago