ಶ್ರೀ ವೆಂಕಟರಮಣ ಸೊಸೈಟಿ- ನೆಲ್ಯಾಡಿ ಶಾಖೆ ಉದ್ಘಾಟನೆ

November 24, 2019
10:24 PM

ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ನ.24ರಂದು ಶುಭಾರಂಭಗೊಂಡಿತು.

Advertisement

ದೀಪಪ್ರಜ್ವಲನೆ ಮಾಡಿ ಸಮಾರಂಭವನ್ನು ಉದ್ಘಾಟಿಸಿ, ಬೆಳ್ತಂಗಡಿಯ ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಂಗಳೂರು
ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಯವರು ‘ಸಹಕಾರ ಸಂಘಗಳು ಸಮಾಜದ ಅಭಿವೃದ್ಧಿಗೆ ಪೂರಕ. ಸೊಸೈಟಿಯ ಸೇವೆ ಎಲ್ಲೆಡೆ ಪಸರಿಸಬೇಕು. ಸಂಘ ತನ್ನ ಅಭಿವೃದ್ಧಿಯೊಂದಿಗೆ ನೊಂದವರ ಕಣ್ಣೀರನ್ನು ಒರೆಸಿದೆ. ಸಂತ್ರಸ್ತರಿಗೆ ಪರಿಹಾರ ನೀಡಿ ಸಮಾಜಕ್ಕೆ ಮಾದರಿಯಾಗಿದೆ. ಸದೃಢ ಆಡಳಿತ ಮಂಡಳಿಯ ಅನುಭವವೇ ವೆಂಕಟರಮಣ ಸೊಸೈಟಿಯ ಅಭಿವೃದ್ಧಿಗೆ ಕಾರಣವಾಗಿದೆ’ ಎಂದರು.

ನೂತನ ಶಾಖಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ‘ವೆಂಕಟರಮಣ ಸೊಸೈಟಿ ಸಾಧನೆಯ‌ ಛಲ ಹೊಂದಿದೆ. ವ್ಯಕ್ತಿಯ ಆರ್ಥಿಕತೆಯ ಬಲವರ್ಧನೆಗೆ ಸಹಕಾರಿ ಸಂಘಗಳು ಅವಶ್ಯ. ಆ ನಿಟ್ಟಿನಲ್ಲಿ ಸೊಸೈಟಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ವಿಸ್ತಾರವಾಗಿ ಬೆಳೆದಿರುವುದು ಶ್ಲಾಘನೀಯ’ ಎಂದರು.

ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಗಣಕೀರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉದ್ಘಾಟಿಸಿದರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ಪ್ರಥಮ ಪಾಲು ಪತ್ರವನ್ನು ಜಿಲ್ಲಾ ಉಪನಿಬಂಧಕ ಪ್ರವೀಣ್ ನಾಯಕ್, ಪ್ರಥಮ ಸಾಲಪತ್ರವನ್ನು ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಉದ್ಯಮಿ ಕುಶಾಲಪ್ಪ ಗೌಡ ಪೂವಾಜೆ ವಿತರಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಉಷಾ ಅಂಚನ್, ಪುತ್ತೂರು ಎ.ಪಿ.ಎಂ.ಸಿ. ಸದಸ್ಯ ಬಾಲಕೃಷ್ಣ ಬಾಣಜಾಲು, ಉದ್ಯಮಿ ಕೆ.ಪಿ. ತೋಮಸ್, ಗಣೇಶ್ ಕಾಂಪ್ಲೆಕ್ಸ್ ಮಾಲಕ ನೆಲ್ಯಾಡಿ ರಾಮಣ್ಣ ಗೌಡ ಭಾಗವಹಿಸಿದ್ದರು.

ಸೊಸೈಟಿಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್, ಪಿ.ಸಿ‌.ಜಯರಾಮ, ಸದಾನಂದ ಜಾಕೆ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ನಾರ್ಕೋಡು, ಕೆ.ಸಿ.ಸದಾನಂದ, ಲತಾ ಎಸ್.ಮಾವಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್ ಗಂಗಾಧರ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಂದಿಸಿದರು. ನಿರ್ದೇಶಕ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group