Advertisement
ಕಾರ್ಯಕ್ರಮಗಳು

ಶ್ರೀ ವೆಂಕಟರಮಣ ಸೊಸೈಟಿ- ನೆಲ್ಯಾಡಿ ಶಾಖೆ ಉದ್ಘಾಟನೆ

Share

ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ನ.24ರಂದು ಶುಭಾರಂಭಗೊಂಡಿತು.

ದೀಪಪ್ರಜ್ವಲನೆ ಮಾಡಿ ಸಮಾರಂಭವನ್ನು ಉದ್ಘಾಟಿಸಿ, ಬೆಳ್ತಂಗಡಿಯ ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಂಗಳೂರು
ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಯವರು ‘ಸಹಕಾರ ಸಂಘಗಳು ಸಮಾಜದ ಅಭಿವೃದ್ಧಿಗೆ ಪೂರಕ. ಸೊಸೈಟಿಯ ಸೇವೆ ಎಲ್ಲೆಡೆ ಪಸರಿಸಬೇಕು. ಸಂಘ ತನ್ನ ಅಭಿವೃದ್ಧಿಯೊಂದಿಗೆ ನೊಂದವರ ಕಣ್ಣೀರನ್ನು ಒರೆಸಿದೆ. ಸಂತ್ರಸ್ತರಿಗೆ ಪರಿಹಾರ ನೀಡಿ ಸಮಾಜಕ್ಕೆ ಮಾದರಿಯಾಗಿದೆ. ಸದೃಢ ಆಡಳಿತ ಮಂಡಳಿಯ ಅನುಭವವೇ ವೆಂಕಟರಮಣ ಸೊಸೈಟಿಯ ಅಭಿವೃದ್ಧಿಗೆ ಕಾರಣವಾಗಿದೆ’ ಎಂದರು.

ನೂತನ ಶಾಖಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ‘ವೆಂಕಟರಮಣ ಸೊಸೈಟಿ ಸಾಧನೆಯ‌ ಛಲ ಹೊಂದಿದೆ. ವ್ಯಕ್ತಿಯ ಆರ್ಥಿಕತೆಯ ಬಲವರ್ಧನೆಗೆ ಸಹಕಾರಿ ಸಂಘಗಳು ಅವಶ್ಯ. ಆ ನಿಟ್ಟಿನಲ್ಲಿ ಸೊಸೈಟಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ವಿಸ್ತಾರವಾಗಿ ಬೆಳೆದಿರುವುದು ಶ್ಲಾಘನೀಯ’ ಎಂದರು.

ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಗಣಕೀರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉದ್ಘಾಟಿಸಿದರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ಪ್ರಥಮ ಪಾಲು ಪತ್ರವನ್ನು ಜಿಲ್ಲಾ ಉಪನಿಬಂಧಕ ಪ್ರವೀಣ್ ನಾಯಕ್, ಪ್ರಥಮ ಸಾಲಪತ್ರವನ್ನು ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಉದ್ಯಮಿ ಕುಶಾಲಪ್ಪ ಗೌಡ ಪೂವಾಜೆ ವಿತರಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಉಷಾ ಅಂಚನ್, ಪುತ್ತೂರು ಎ.ಪಿ.ಎಂ.ಸಿ. ಸದಸ್ಯ ಬಾಲಕೃಷ್ಣ ಬಾಣಜಾಲು, ಉದ್ಯಮಿ ಕೆ.ಪಿ. ತೋಮಸ್, ಗಣೇಶ್ ಕಾಂಪ್ಲೆಕ್ಸ್ ಮಾಲಕ ನೆಲ್ಯಾಡಿ ರಾಮಣ್ಣ ಗೌಡ ಭಾಗವಹಿಸಿದ್ದರು.

ಸೊಸೈಟಿಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್, ಪಿ.ಸಿ‌.ಜಯರಾಮ, ಸದಾನಂದ ಜಾಕೆ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ನಾರ್ಕೋಡು, ಕೆ.ಸಿ.ಸದಾನಂದ, ಲತಾ ಎಸ್.ಮಾವಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್ ಗಂಗಾಧರ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಂದಿಸಿದರು. ನಿರ್ದೇಶಕ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

5 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

15 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

15 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

22 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

1 day ago