Advertisement
ಕಾರ್ಯಕ್ರಮಗಳು

ಶ್ರೀ ವೆಂಕಟರಮಣ ಸೊಸೈಟಿ- ನೆಲ್ಯಾಡಿ ಶಾಖೆ ಉದ್ಘಾಟನೆ

Share

ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ನ.24ರಂದು ಶುಭಾರಂಭಗೊಂಡಿತು.

ದೀಪಪ್ರಜ್ವಲನೆ ಮಾಡಿ ಸಮಾರಂಭವನ್ನು ಉದ್ಘಾಟಿಸಿ, ಬೆಳ್ತಂಗಡಿಯ ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಂಗಳೂರು
ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಯವರು ‘ಸಹಕಾರ ಸಂಘಗಳು ಸಮಾಜದ ಅಭಿವೃದ್ಧಿಗೆ ಪೂರಕ. ಸೊಸೈಟಿಯ ಸೇವೆ ಎಲ್ಲೆಡೆ ಪಸರಿಸಬೇಕು. ಸಂಘ ತನ್ನ ಅಭಿವೃದ್ಧಿಯೊಂದಿಗೆ ನೊಂದವರ ಕಣ್ಣೀರನ್ನು ಒರೆಸಿದೆ. ಸಂತ್ರಸ್ತರಿಗೆ ಪರಿಹಾರ ನೀಡಿ ಸಮಾಜಕ್ಕೆ ಮಾದರಿಯಾಗಿದೆ. ಸದೃಢ ಆಡಳಿತ ಮಂಡಳಿಯ ಅನುಭವವೇ ವೆಂಕಟರಮಣ ಸೊಸೈಟಿಯ ಅಭಿವೃದ್ಧಿಗೆ ಕಾರಣವಾಗಿದೆ’ ಎಂದರು.

ನೂತನ ಶಾಖಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ‘ವೆಂಕಟರಮಣ ಸೊಸೈಟಿ ಸಾಧನೆಯ‌ ಛಲ ಹೊಂದಿದೆ. ವ್ಯಕ್ತಿಯ ಆರ್ಥಿಕತೆಯ ಬಲವರ್ಧನೆಗೆ ಸಹಕಾರಿ ಸಂಘಗಳು ಅವಶ್ಯ. ಆ ನಿಟ್ಟಿನಲ್ಲಿ ಸೊಸೈಟಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ವಿಸ್ತಾರವಾಗಿ ಬೆಳೆದಿರುವುದು ಶ್ಲಾಘನೀಯ’ ಎಂದರು.

ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಗಣಕೀರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉದ್ಘಾಟಿಸಿದರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ಪ್ರಥಮ ಪಾಲು ಪತ್ರವನ್ನು ಜಿಲ್ಲಾ ಉಪನಿಬಂಧಕ ಪ್ರವೀಣ್ ನಾಯಕ್, ಪ್ರಥಮ ಸಾಲಪತ್ರವನ್ನು ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಉದ್ಯಮಿ ಕುಶಾಲಪ್ಪ ಗೌಡ ಪೂವಾಜೆ ವಿತರಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಉಷಾ ಅಂಚನ್, ಪುತ್ತೂರು ಎ.ಪಿ.ಎಂ.ಸಿ. ಸದಸ್ಯ ಬಾಲಕೃಷ್ಣ ಬಾಣಜಾಲು, ಉದ್ಯಮಿ ಕೆ.ಪಿ. ತೋಮಸ್, ಗಣೇಶ್ ಕಾಂಪ್ಲೆಕ್ಸ್ ಮಾಲಕ ನೆಲ್ಯಾಡಿ ರಾಮಣ್ಣ ಗೌಡ ಭಾಗವಹಿಸಿದ್ದರು.

ಸೊಸೈಟಿಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್, ಪಿ.ಸಿ‌.ಜಯರಾಮ, ಸದಾನಂದ ಜಾಕೆ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ನಾರ್ಕೋಡು, ಕೆ.ಸಿ.ಸದಾನಂದ, ಲತಾ ಎಸ್.ಮಾವಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್ ಗಂಗಾಧರ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಂದಿಸಿದರು. ನಿರ್ದೇಶಕ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

17 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

17 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago