Advertisement
ಕಾರ್ಯಕ್ರಮಗಳು

ಶ್ರೀ ವೆಂಕಟರಮಣ ಸೊಸೈಟಿ- ನೆಲ್ಯಾಡಿ ಶಾಖೆ ಉದ್ಘಾಟನೆ

Share

ಸುಳ್ಯ: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 13ನೇ ನೂತನ ಶಾಖೆಯು ಕಡಬ ತಾಲೂಕಿನ ನೆಲ್ಯಾಡಿಯ ಶ್ರೀ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ನ.24ರಂದು ಶುಭಾರಂಭಗೊಂಡಿತು.

ದೀಪಪ್ರಜ್ವಲನೆ ಮಾಡಿ ಸಮಾರಂಭವನ್ನು ಉದ್ಘಾಟಿಸಿ, ಬೆಳ್ತಂಗಡಿಯ ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಿ ಆಶೀರ್ವಚನ ನೀಡಿದ ಆದಿಚುಂಚನಗಿರಿ ಮಂಗಳೂರು
ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿಯವರು ‘ಸಹಕಾರ ಸಂಘಗಳು ಸಮಾಜದ ಅಭಿವೃದ್ಧಿಗೆ ಪೂರಕ. ಸೊಸೈಟಿಯ ಸೇವೆ ಎಲ್ಲೆಡೆ ಪಸರಿಸಬೇಕು. ಸಂಘ ತನ್ನ ಅಭಿವೃದ್ಧಿಯೊಂದಿಗೆ ನೊಂದವರ ಕಣ್ಣೀರನ್ನು ಒರೆಸಿದೆ. ಸಂತ್ರಸ್ತರಿಗೆ ಪರಿಹಾರ ನೀಡಿ ಸಮಾಜಕ್ಕೆ ಮಾದರಿಯಾಗಿದೆ. ಸದೃಢ ಆಡಳಿತ ಮಂಡಳಿಯ ಅನುಭವವೇ ವೆಂಕಟರಮಣ ಸೊಸೈಟಿಯ ಅಭಿವೃದ್ಧಿಗೆ ಕಾರಣವಾಗಿದೆ’ ಎಂದರು.

ನೂತನ ಶಾಖಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ‘ವೆಂಕಟರಮಣ ಸೊಸೈಟಿ ಸಾಧನೆಯ‌ ಛಲ ಹೊಂದಿದೆ. ವ್ಯಕ್ತಿಯ ಆರ್ಥಿಕತೆಯ ಬಲವರ್ಧನೆಗೆ ಸಹಕಾರಿ ಸಂಘಗಳು ಅವಶ್ಯ. ಆ ನಿಟ್ಟಿನಲ್ಲಿ ಸೊಸೈಟಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ವಿಸ್ತಾರವಾಗಿ ಬೆಳೆದಿರುವುದು ಶ್ಲಾಘನೀಯ’ ಎಂದರು.

ಸೊಸೈಟಿಯ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ಅಧ್ಯಕ್ಷತೆ ವಹಿಸಿದ್ದರು. ಗಣಕೀರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಉದ್ಘಾಟಿಸಿದರು. ಪ್ರಥಮ ಠೇವಣಿ ಪತ್ರ ವಿತರಣೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಸರ್ವೋತ್ತಮ ಗೌಡ, ಪ್ರಥಮ ಪಾಲು ಪತ್ರವನ್ನು ಜಿಲ್ಲಾ ಉಪನಿಬಂಧಕ ಪ್ರವೀಣ್ ನಾಯಕ್, ಪ್ರಥಮ ಸಾಲಪತ್ರವನ್ನು ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ, ಪ್ರಥಮ ಉಳಿತಾಯ ಖಾತೆ ಪುಸ್ತಕವನ್ನು ಉದ್ಯಮಿ ಕುಶಾಲಪ್ಪ ಗೌಡ ಪೂವಾಜೆ ವಿತರಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಉಷಾ ಅಂಚನ್, ಪುತ್ತೂರು ಎ.ಪಿ.ಎಂ.ಸಿ. ಸದಸ್ಯ ಬಾಲಕೃಷ್ಣ ಬಾಣಜಾಲು, ಉದ್ಯಮಿ ಕೆ.ಪಿ. ತೋಮಸ್, ಗಣೇಶ್ ಕಾಂಪ್ಲೆಕ್ಸ್ ಮಾಲಕ ನೆಲ್ಯಾಡಿ ರಾಮಣ್ಣ ಗೌಡ ಭಾಗವಹಿಸಿದ್ದರು.

ಸೊಸೈಟಿಯ ನಿರ್ದೇಶಕರಾದ ನಿತ್ಯಾನಂದ ಮುಂಡೋಡಿ, ಚಂದ್ರಾ ಕೋಲ್ಚಾರ್, ಪಿ.ಸಿ‌.ಜಯರಾಮ, ಸದಾನಂದ ಜಾಕೆ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ನಾರ್ಕೋಡು, ಕೆ.ಸಿ.ಸದಾನಂದ, ಲತಾ ಎಸ್.ಮಾವಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೊಸೈಟಿಯ ಉಪಾಧ್ಯಕ್ಷ ಪಿ.ಎಸ್ ಗಂಗಾಧರ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಂದಿಸಿದರು. ನಿರ್ದೇಶಕ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago