ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಜಾನಪದ ಸಾಂಸ್ಕೃತಿಕ ವೈಭವ ನಡೆಯಿತು. ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ವೇದಿಕೆಯಲ್ಲಿ ಮಂಜು ಸುಳ್ಯ ನೇತೃತ್ವದ ಸುಗಿಪು ಜನಪದ ಕಲಾ ತಂಡದ ಜನಪದ ನೃತ್ಯ ರೂಪಕ ಮತ್ತು ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾರ್ವಜನಿಕ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಚಾಲನೆ ನೀಡಿದರು.ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು .
ಅತಿಥಿಗಳಾಗಿ ಸ್ಥಬ್ಧ ಚಿತ್ರಗಳ ರೂವಾರಿ ಕೇಶವ ಸುವರ್ಣ, ಎಸ್. ಸಿಕ್ಸ್ ನ ಉಪಾಧ್ಯಕ್ಷ ಚಿದಾನಂದ ವಿದ್ಯಾನಗರ, ವಕೀಲ ದಿನೇಶ್ ಅಂಬೆಕಲ್ಲು, ಸುಗಿಪು ಕಲಾ ತಂಡದ ನಿರ್ದೇಶಕ ಮಂಜು ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿದಾನಂದ ವಿದ್ಯಾನಗರ ಸ್ವಾಗತಿಸಿದರು. ನಾರಾಯಣ ಕೇಕಡ್ಕ ವಂದಿಸಿದರು. ದಸರಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…